ಬಸವನಬಾಗೇವಾಡಿ: ಪ್ರವಾಸಿ ಬಸ್‌ಗೆ ಲಾರಿ ಢಿಕ್ಕಿ; ಹಲವು ವಿದ್ಯಾರ್ಥಿಗಳಿಗೆ ಗಾಯ

Update: 2018-12-13 06:50 GMT

ವಿಜಯಪುರ, ಡಿ.13: ಶಾಲಾ ಪ್ರವಾಸಿ ಬಸ್ಸಿಗೆ ಗೂಡ್ಸ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಹಲವು ವಿದ್ಯಾರ್ಥಿಗಳು ಹಾಗೂ ಲಾರಿ ಚಾಲಕ ಗಾಯಗೊಂಡ ಘಟನೆ ಬಸವನಬಾಗೇವಾಡಿ ತಾಲೂಕಿನ ಮುತ್ತಗಿ ಕ್ರಾಸ್ ಬಳಿ ನಿನ್ನೆ ರಾತ್ರಿ ಸಂಭವಿಸಿದೆ.

ಕಲಬುರ್ಗಿ ಜಿಲ್ಲೆಯ ವಿದ್ಯಾರ್ಥಿಗಳು ಕೂಡಲ ಸಂಗಮಕ್ಕೆ ಬಸ್ಸಿನಲ್ಲಿ ಪ್ರವಾಸಕ್ಕೆ ಬಂದಿದ್ದರು. ಅವರು ಆಲಮಟ್ಟಿ ನೋಡಿಕೊಂಡು ವಿಜಯಪುರದಲ್ಲಿ ವಸ್ತಿ ಮಾಡಲು ತೆರಳುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ.

 ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಲಾರಿಯೊಂದು ರಸ್ತೆ ವಿಭಜಕವನ್ನು ದಾಟಿಕೊಂಡು ಬಂದು ಎದುರಿನಿಂದ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಬಸ್‌ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ದೌಡಾಯಿಸಿದ್ದು, ತಡರಾತ್ರಿ ವರೆಗೆ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News