ಡಿ.14ಕ್ಕೆ ಬೆಳಗಾವಿಯಲ್ಲಿ ದಸಂಸ ಬೃಹತ್ ಸಮಾವೇಶ

Update: 2018-12-13 13:59 GMT

ಬೆಂಗಳೂರು, ಡಿ.13: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬೆಳಗಾವಿಯ ಸೌವರ್ಣ ಸೌಧದ ಮುಂಭಾಗ ಡಿ.14ರಂದು ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿರುವುದಾಗಿ ಸಮಿತಿಯ ಜಿಲ್ಲಾ ಸಂಚಾಲಕ ಬೇಗೂರು ಮುನಿರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮುರುಘಾಮಠದ ಮುರುಘ ರಾಜೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಸಮಾವೇಶವನ್ನು ಉದ್ಘಾಟಿಸಲಿದ್ದು, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ಆರ್.ಪಿ.ತಿಮ್ಮಾಪುರ, ಕೆ.ಮುಕುಡಪ್ಪ, ಎಚ್.ಎಂ.ವಿಶ್ವನಾಥ್ ಹಾಗೂ ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಶೋಷಿತರಿಗೆ ಸಾಮಾಜಿಕ ನ್ಯಾಯ ನೀಡಲು ಸಂವಿಧಾನ ಬದ್ಧವಾಗಿ ರಾಜ್ಯ ಸರಕಾರ ತಂದಿದ್ದ, ಶಾಸನ ಬದ್ಧವಾಗಿ ರೂಪಿಸಿದ ಕಾಯ್ದೆಗಳ ವಿರುದ್ಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸುಗ್ರಿವಾಜ್ಞೆಗೆ ಆಗ್ರಹಿಸಿ ಬೃಹತ್ ಸಮಾವೇಶವನ್ನು ಆಯೋಜಿಸಿರುವುದಾಗಿ ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News