ಪ್ರಸಾದ ಸೇವನೆಯಿಂದ 11 ಸಾವು ಪ್ರಕರಣ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
Update: 2018-12-14 15:53 GMT
ಮೈಸೂರು,ಡಿ.14: ಹನೂರಿನಲ್ಲಿ ಪ್ರಸಾದ ಸೇವನೆಯಿಂದ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಘೋಷಿಸಿದರು.
ಕೆ.ಆರ್.ಆಸ್ಪತ್ರೆಗೆ ಶುಕ್ರವಾರ ಭೇಟಿ ಅಸ್ವಸ್ಥರಿಗೆ ಸಾಂತ್ವನ ಹೇಳಿದ ಸಚಿವರು, ಇವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೂ ಸಹ ಸರ್ಕಾರವೇ ಚಿಕಿತ್ಸಾ ವೆಚ್ಚ ಭರಿಸಲಿದ್ದು, ಯಾವುದೇ ಕಾರಣಕ್ಕೂ ಆತಂಕಪಡಬೇಡಿ ಎಂದು ಧೈರ್ಯ ತುಂಬಿದರು.
ಮೃತ ಕುಟುಂಬದವರಿಗೆ ತಲಾ 5 ಲಕ್ಷ ರೂ. ನೀಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದು, ಅವರು ಬೆಳಗಾವಿ ಅಧಿವೇಶನದಲ್ಲಿರುವುದರಿಂದ ಸಂಬಂಧಪಟ್ಟ ಶಾಸಕರು, ಸಚಿವರು ಈಗಾಗಲೇ ಹೊರಟಿದ್ದು, ಸ್ವಲ್ಪ ಹೊತ್ತಿನಲ್ಲೇ ಸ್ಥಳಕ್ಕೆ ಬರಲಿದ್ದಾರೆ ಎಂದು ಹೇಳಿದರು.