ಜೂಜಾಟ ದಂಧೆ ಮೇಲೆ ಸಿಸಿಬಿ ದಾಳಿ: 39 ಮಂದಿಯ ಬಂಧನ

Update: 2018-12-14 17:25 GMT

ಬೆಂಗಳೂರು, ಡಿ. 14: ನಗರದ ವಿದ್ಯಾರಣ್ಯಪುರದಲ್ಲಿ ಜೂಜಾಟದ ದಂಧೆಯ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು 39 ಜನರನ್ನು ಬಂಧಿಸಿದ್ದು, 52 ಸಾವಿರ ರೂ.ಗಳ ನಗದು ವಶಪಡಿಸಿಕೊಂಡಿದ್ದಾರೆ.

ವಿದ್ಯಾರಣ್ಯಪುರದ ನಂಜಪ್ಪ ವೃತ್ತದ ಮನೆಯೊಂದರ ಮಹಡಿಯಲ್ಲಿ ಸುಜಿತ್ ಅಂಡ್ ರಿಕ್ರಿಯೇಷನ್ ಕ್ಲಬ್‌ನಲ್ಲಿ ಇಸ್ಪೀಟ್ ದಂಧೆ ನಡೆಸುತ್ತಿರುವ ಸಂಬಂಧ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ ಪೊಲೀಸರು 39 ಜನರನ್ನು ಬಂಧಿಸಿದ್ದಾರೆ.

ಕ್ಲಬ್‌ನ ಮಾಲಕ ಜಗದೀಶ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಹಲವಾರು ದಿನಗಳಿಂದ ಇಸ್ಪೀಟ್ ದಂಧೆ ನಡೆಸುತ್ತಿದ್ದೇವೆ ಎಂದು ಒಪ್ಪಿಕೊಂಡಿದ್ದಾನೆ. ದಂಧೆಗೆ ಬಳಕೆ ಮಾಡುತ್ತಿದ್ದ ವಸ್ತುಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News