ಡಿ.18ರಿಂದ ಕೆಎಸ್‌ಆರ್‌ಟಿಸಿ ನೌಕರರ 6ನೇ ರಾಜ್ಯ ಸಮ್ಮೇಳನ

Update: 2018-12-14 17:33 GMT

ಬೆಂಗಳೂರು, ಡಿ.14: ಕೆರ್ಸ್ಸಾಟಿಸಿ ಸಿಬ್ಬಂದಿ ಹಾಗೂ ನೌಕರರ ಒಕ್ಕೂಟ ಡಿ.18ರಿಂದ ಮೂರು ದಿನಗಳವರೆಗೆ ಕಲಬುರಗಿಯಲ್ಲಿ 6ನೇ ರಾಜ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಒಕ್ಕೂಟ ಪ್ರಧಾನ ಕಾರ್ಯದರ್ಶಿ ಎಚ್.ವಿ.ಅನಂತ ಸುಬ್ಬರಾವ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲೂಕೆಆರ್‌ಟಿಸಿ ಹಾಗೂ ಎನ್‌ಕೆಆರ್‌ಟಿಸಿಗಳಿಂದ 500 ಪ್ರತಿನಿಧಿಗಳು ಭಾಗವಹಿಸುತ್ತಾರೆ. ಈ ಸಮ್ಮೇಳನದಲ್ಲಿ ಕೇಂದ್ರ ಸರಕಾರದ ಸಾರಿಗೆ ನಿಗಮಗಳನ್ನು ಖಾಸಗೀಕರಿಸುವ ನೀತಿಯ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು.

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಜ.8 ಹಾಗೂ 9ರಂದು ದೇಶಾದ್ಯಂತ ಕಾರ್ಮಿಕರು ಸಂಪೂರ್ಣ ಮುಷ್ಕರ ಮಾಡಲು ಸಮಾವೇಶದಲ್ಲಿ ಕರೆ ನೀಡಲಾಗುತ್ತದೆ. ಸಮ್ಮೇಳನವನ್ನು ಹೊಸತು ಪತ್ರಿಕೆಯ ಸಂಪಾದಕ ಡಾ.ಸಿದ್ಧನಗೌಡ ಪಾಟೀಲ್ ಉದ್ಘಾಟಿಸಲಿದ್ದು, ಒಕ್ಕೂಟದ ಉಪಧ್ಯಾಕ್ಷ ಕಾ.ಎಂ.ಎಲ್.ಯಾದವ್ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News