ಇಬ್ಬಲೂರು-ಕಾರ್ಮೆಲ್‍ರಾಮ್ ಜಂಕ್ಷನ್ ರಸ್ತೆ ಕಾಮಗಾರಿ 2 ವರ್ಷದಲ್ಲಿ ಪೂರ್ಣ: ಡಿಸಿಎಂ ಪರಮೇಶ್ವರ್

Update: 2018-12-14 18:15 GMT

ಬೆಳಗಾವಿ, ಡಿ.14: ಸರ್ಜಾಪುರ ರಸ್ತೆಯ ಇಬ್ಬಲೂರು ಜಂಕ್ಷನ್‍ನಿಂದ ಕಾರ್ಮೆಲ್‍ರಾಮ್ ಜಂಕ್ಷನ್‍ವರೆಗಿನ ರಸ್ತೆ ಅಗಲೀಕರಣ ಮತ್ತು ಸರ್ವೀಸ್ ರಸ್ತೆ ಕಾಮಗಾರಿಯನ್ನು ಮುಂದಿನ ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಶುಕ್ರವಾರ ವಿಧಾನಪರಿಷತ್‍ನಲ್ಲಿ ಪ್ರಶ್ನೋತ್ತರ ವೇಳೇಯಲ್ಲಿ ಕಾಂಗ್ರೆಸ್ ಸದಸ್ಯ ರಿಝ್ವಾನ್ ಅರ್ಷದ್ ಪ್ರಶ್ನೆಗೆ ಉತ್ತರಿಸಿದ ಅವರು, ಸುಮಾರು 100ಕೋಟಿ ರೂ.ವೆಚ್ಚದಲ್ಲಿ ಮಾರ್ಚ್ 2018ರಿಂದ ಕಾಮಗಾರಿಯನ್ನು ಪ್ರಾರಂಭಿಸಿದ್ದೇವೆ. ಒಟ್ಟು 4.70ಕಿಮೀ ರಸ್ತೆಯ ದುರಸ್ತಿಗೆ ಎರಡು ವರ್ಷಗಳ ಕಾಲಮಿತಿ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದರು.

ರಸ್ತೆ ಅಗಲೀಕರಣವನ್ನು ಸ್ಥಗಿತಗೊಳಿಸುವಚಿತೆ ಕೆಲವರು ನ್ಯಾಯಾಲದಲ್ಲಿ ಪ್ರಕರಣ ದಾಖಲಿದ್ದಾರೆ. ಇವರೊಂದಿಗೆ ಮಾತುಕತೆ ನಡೆಸಿ, ಪ್ರಕರಣವನ್ನು ಹಿಂಪಡೆಯುವಂತೆ ಮಾಡಲಾಗುವುದು. ಹೀಗಾಗಿ ಎರಡು ವರ್ಷದೊಳಗಾಗಿ ಕಾಮಗಾರಿ ಪೂರ್ಣಗೊಳಿಸದಿದ್ದಾರೆ ಗುತ್ತಿಗೆದಾರರಿಗೆ ದಂಡ ವಿಧಿಸಲಾಗುವುದು ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News