ಮೈಸೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Update: 2018-12-14 18:48 GMT

ಮೈಸೂರು,ಡಿ.14: ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತಾಯಿಯೊಂದಿಗೆ ಜಗಳವಾಡಿಕೊಂಡು ಹೋಗಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸಿದ್ದಾರ್ಥನಗರದಲ್ಲಿ ನಡೆದಿದೆ.

ಮೃತರನ್ನು ಸಿದ್ದಾರ್ಥ ನಗರದ ನಿವಾಸಿ ಅನಿಲ್ (45)ಎಂದು ಗುರುತಿಸಲಾಗಿದೆ. ಇವರು ಕಳೆದ 18ವರ್ಷಗಳ ಹಿಂದೆ ವಿವಾಹವಾಗಿದ್ದು, ಪ್ರತ್ಯೇಕವಾಗಿ ಸಿದ್ದಾರ್ಥನಗರದಲ್ಲಿ ವಾಸಿಸುತ್ತಿದ್ದರು. ಆಸ್ತಿ ಹಂಚಿಕೆ ಕುರಿತು ತಾಯಿ ಜೊತೆ ಜಗಳವಾಡುತ್ತಿದ್ದರು. ಮಂಗಳವಾರ ರಾತ್ರಿ ಮದ್ಯಸೇವಿಸಿ ತಾಯಿ ಮನೆಗೆ ಹೋಗಿ ಅವರೊಂದಿಗೆ ಜಗಳವಾಡಿಕೊಂಡು ಬಂದಿದ್ದು ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಸಿದ್ದಾರ್ಥನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News