ಕೃಷ್ಣಾಪುರದ ಪ್ಯಾರಡೈಸ್ ಕ್ಲಬ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

Update: 2018-12-15 06:34 GMT

ಮಂಗಳೂರು, ಡಿ.15: ಕೃಷ್ಣಾಪುರದ ಪ್ಯಾರಡೈಸ್ ಕ್ಲಬ್(ರಿ.)ನ ವಾರ್ಷಿಕ ಮಹಾಸಭೆಯು ಕ್ಲಬ್‌ನ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕ್ಲಬ್‌ನ ನೂತನ ಅಧ್ಯಕ್ಷರಾಗಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಮತ್ತು ಉಪಾಧ್ಯಕ್ಷರಾಗಿ ಅಬೂಬಕರ್ ಟಿ.ಎಂ. ಆಯ್ಕೆಯಾದರು.

ಗೌರವಾಧ್ಯಕ್ಷರಾಗಿ ಅಬ್ದುಲ್ ಜಲೀಲ್(ಅದ್ದು), ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್, ಜೊತೆ ಕಾರ್ಯದರ್ಶಿ ರಫೀಕ್ ಬಾಂಬೆ, ಖಜಾಂಚಿಯಾಗಿ ಫಿರೋಝ್ ಖಾನ್, ಟೀಮ್ ಮ್ಯಾನೇಜರ್ ಆಗಿ ಆರಿಫ್ ಎಸಿಸಿ ಆಯ್ಕೆಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News