ಲೋಕಸಭಾ ಚುನಾವಣೆಗೆ ನಾನೂ ಸ್ಪರ್ಧಾಕಾಂಕ್ಷಿ: ಐವನ್ ಡಿಸೋಜ

Update: 2018-12-15 08:25 GMT

ಮಂಗಳೂರು, ಡಿ.15: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಾಸೆ ಇದೆ. ಟಿಕೆಟ್ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ. ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.

ಮಂಗಳೂರಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಲೋಕಾಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರು ಅಧಿಕ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ನಾನು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಕೂಡಾ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಅವರಿಗೆ ಟಿಕೆಟ್ ನೀಡಿದರೆ ಸ್ವಾಗತ. ಪಕ್ಷದ ಪರವಾಗಿ ಕೆಲಸ ಮಾಡುವೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಾಗೇಂದ್ರ ಕುಮಾರ್, ಶಾಹುಲ್ ಹಮೀದ್ ಹಳೆಯಂಗಡಿ, ಪಿಯೂಸ್ ಮೊಂತೆರೊ, ಸಿರಿಲ್ ಡಿಸೋಜ, ನೀಲಯ್ಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News