ಬೆಂಗಳೂರು: ರಸ್ತೆ ಅಪಘಾತಕ್ಕೆ ಆಟೊ ಚಾಲಕ ಬಲಿ

Update: 2018-12-15 13:57 GMT

ಬೆಂಗಳೂರು, ಡಿ.15: ಆಟೊವೊಂದಕ್ಕೆ ಲಗೇಜ್ ವಾಹನ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಇಲ್ಲಿನ ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜಗೋಪಾಲನಗರದ ಪುಂಡರೀಕಾಕ್ಷ(35) ಎಂಬುವರು ಮೃತ ಪಟ್ಟ ಆಟೊ ಚಾಲಕ ಎಂದು ಪೊಲೀಸರು ಗುರುತಿಸಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ನೆಲಗೆದರನಹಳ್ಳಿಯಿಂದ ಶುಕ್ರವಾರ ರಾತ್ರಿ 10:30ರ ಸುಮಾರಿಗೆ ರೋಗಿಯೊಬ್ಬರನ್ನು ಸಪ್ತಗಿರಿ ಆಸ್ಪತ್ರೆಗೆ ಮೂವರು ಸಂಬಂಧಿಕರ ಜೊತೆ ಆಟೊದಲ್ಲಿ ಪುಂಡರೀಕಾಕ್ಷ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆ 8ನೆ ಮೈಲಿ ಕಲ್ಲು ಬಳಿ ತುಮಕೂರು ಕಡೆಯಿಂದ ಹೆಸರುಘಟ್ಟದ ಕಡೆ ಬರುತ್ತಿದ್ದ ಲಗೇಜ್ ವಾಹನ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಆಟೊ ಉರುಳಿ ಗಂಭೀರವಾಗಿ ಗಾಯಗೊಂಡ ಪುಂಡರೀಕಾಕ್ಷರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಪೀಣ್ಯ ಸಂಚಾರ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News