ಬಂಟ್ವಾಳ: ಜಿ.ಪಂ. ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ ವಿರುದ್ಧ ಪ್ರಚೋದನಾಕಾರಿ ಸಂದೇಶ ರವಾನೆ; ದೂರು ದಾಖಲು

Update: 2018-12-16 12:27 GMT

ಬಂಟ್ವಾಳ, ಡಿ.16: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಅವರ ವಿರುದ್ಧ ಪ್ರಚೋದನಾಕಾರಿ ಸಂದೇಶ ಹರಿಯಬಿಟ್ಟ ಕುರಿತು ಬಂಟ್ವಾಳ ನಗರ ಠಾಣೆಗೆ ದೂರು ನೀಡಲಾಗಿದೆ.

ಈ ಕುರಿತು ಫೇಸ್‌ಬುಕ್ ಖಾತೆಗಳಾದ ರಾಘವೇಂದ್ರ ಹೊಳ್ಳ, ತಾಪಂ ಸದಸ್ಯ ಪ್ರಭಾಕರ ಪ್ರಭು ಮತ್ತು ಬಿಜೆಪಿ ಬಂಟ್ವಾಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶರಣ್ ರೈ ಎಂಬವರು ಪೊಲೀಸ್ ದೂರಿನಲ್ಲಿ ಒತ್ತಾಯಿಸಿದ್ದಾರೆ.

ದೂರು ಸ್ವೀಕರಿಸಿರುವ ಬಂಟ್ವಾಳ ನಗರ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News