ಹಳೆಕೋಟೆ: ಸೈಯದ್ ಮದನಿ ಶಾಲಾ ವಾರ್ಷಿಕ ಕ್ರೀಡಾಕೂಟ

Update: 2018-12-16 14:33 GMT

ಉಳ್ಳಾಲ, ಡಿ.16: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸೈಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಯದ್ ಮದನಿ ಪ್ರೌಢ ಶಾಲೆಯ ವಾರ್ಷಿಕ ಕ್ರೀಡಾಕೂಟವು ಅಳೇಕಲ ಮದನಿ ಶಾಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ದ.ಕ.ಜಿಪಂ ಸದಸ್ಯೆ ಧನಲಕ್ಷ್ಮಿ ಗಟ್ಟಿ ಶಾಂತಿಯ ಸಂಕೇತವಾದ ಪಾರಿವಾಳವನ್ನು ಹಾರಿಸುವುದರೊಂದಿಗೆ ಕ್ರೀಡಾಕೂಟ ಉದ್ಘಾಟಿಸಿದರು. ಉಳ್ಳಾಲ ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಾಯಕ್ ತೋರಗಲ್ ಪಥಸಂಚಲನಕ್ಕೆ ಚಾಲನೆ ನೀಡಿದರು. ಉಳ್ಳಾಲ ನಗರಸಭೆ ಪೌರಾಯುಕ್ತೆ ವಾಣಿ ವಿ. ಆಳ್ವ ಧ್ವಜ ವಂದನೆ ಸ್ವೀಕರಿಸಿದು. ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್‌ನ ಉಪಾಧ್ಯಕ್ಷ ಹಾಜಿ ಯು.ಕೆ. ಇಬ್ರಾಹೀಂ ಧ್ವಜಾರೋಹಣ ಮಾಡಿದರು.

ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್‌ನ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ತ್ವಾಹ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಉಳ್ಳಾಲ ನಗರಸಭೆಯ ಸದಸ್ಯರಾದ ಯು.ಎ. ಇಸ್ಮಾಯೀಲ್, ಮುಝಫರ್, ಅಸ್ಗರ್ ಅಲಿ, ಅಳೇಕಲ ಮದನಿ ಶಾಲಾ ಸಂಚಾಲಕ ಇಬ್ರಾಹಿಂ ಯು.ಎನ್, ಶಾಲಾಭಿವ್ರದ್ದಿ ಸಮಿತಿಯ ಉಪಾಧ್ಯಕ್ಷ ಯು.ಎನ್. ಇಬ್ರಾಹೀಂ, ಫಾರೂಕ್ ಯು.ಎಚ್, ಕರೀಂ ಯು. ಎಚ್, ಹಾಜಿ ಝೈನುದ್ದೀನ್, ಅಲ್ತಾಫ್ ಯು.ಎಚ್, ಆಡಳಿತಾಧಿಕಾರಿ ಅಬ್ದುಲ್ಲತೀಫ್, ಅಲಿ ಮೋನು, ಸಹೋದರ ಸಂಸ್ಥೆಯ ಮುಖ್ಯಶಿಕ್ಷಕರಾದ ನಸೀಮಾ, ಇಮ್ತಿಯಾಝ್,ರಮ್ಲತ್, ಪ್ರತಿಭಾ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಕೆ.ಎಂ.ಕೆ. ಮಂಜನಾಡಿ ಸ್ವಾಗತಿಸಿದರು. ಶಿಕ್ಷಕಿ ಸೌಮ್ಯ ವಂದಿಸಿದರು. ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ರಫೀಕ್ ಹಮೀದ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News