ರಫೇಲ್ ತೀರ್ಪು ಗೊಂದಲಕ್ಕೆ ಕೇಂದ್ರ ಹೊಣೆ: ಅಲಿ ಹಸನ್

Update: 2018-12-16 14:37 GMT

ಮಂಗಳೂರು, ಡಿ.16: ರಫೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಗೊಂದಲಮಯವಾಗಲು ಕೇಂದ್ರ ಸರಕಾರವೇ ಕಾರಣವಾಗಿದೆ ಎಂದು ಮಂಗಳೂರು ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲಿ ಹಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನರನ್ನು ಒಂದಲ್ಲೊಂದು ವಿಷಯದಲ್ಲಿ ದಾರಿತಪ್ಪಿಸುತ್ತಿರುವ ಬಿಜೆಪಿ ಪಂಚರಾಜ್ಯ ಚುನಾವಣೆಯಲ್ಲಿ ಸೋಲುಂಡ ಬಳಿಕ ತೀವ್ರ ಹತಾಶೆಗೊಂಡಿದೆ. ಈ ಮಧ್ಯೆ ರಫೇಲ್ ಒಪ್ಪಂದಕ್ಕೆ ಸಂಬಂಧಿಸಿ ಕೇಂದ್ರ ಸರಕಾರ ತಪ್ಪು ಮಾಹಿತಿ ನೀಡಿ ಗೊಂದಲ ಸೃಷ್ಟಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನ ವ್ಯಾಖ್ಯಾನದ ಬಗ್ಗೆಯೂ ತಿದ್ದುಪಡಿ ಮಾಡಲು ಕೇಂದ್ರ ಮುಂದಾಗಿರುವುದು ಕೂಡ ಬಿಜೆಪಿಯು ಆಡಳಿತ ವ್ಯವಸ್ಥೆಯನ್ನು ದುರುಪಯೋಗಪಡಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News