ಮಂಡ್ಯ: ವಿದ್ಯುತ್ ತಂತಿ ತಗುಲಿ ಕಬ್ಬಿನ ಬೆಳೆ ಬೆಂಕಿಗಾಹುತಿ

Update: 2018-12-16 17:04 GMT

ಮಂಡ್ಯ,ಡಿ.16: ಗದ್ದೆಯಲ್ಲಿ ಜೋತು ಬಿದ್ದ ವಿದ್ಯುತ್ ತಂತಿ ತಗುಲಿ 3 ಎಕರೆಯಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾದ ಘಟನೆ ಮದ್ದೂರು ತಾಲೂಕಿನ ಮಾದರಹಳ್ಳಿ ಗ್ರಾಮದಲ್ಲಿ ರವಿವಾರ ನಡೆದಿದೆ.

ಎಂ.ಡಿ.ಜಗದೀಶ್ ಹಾಗೂ ಅವರ ಅಣ್ಣ ಶಿವಕುಮಾರ್ ಅವರಿಗೆ ಸೇರಿದ 3 ಎಕರೆ 3 ಗುಂಟೆ ಜಮೀನಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಎಲ್ಲ ಕಡೆ ವ್ಯಾಪಿಸಿದೆ. ಅಗ್ನಿಶಾಮಕ ಸಿಬ್ಬಂದಿ ಸಕಾಲಕ್ಕೆ ಆಗಮಿಸಿದ್ದರೂ ಬೆಂಕಿಯನ್ನು ಹತೋಟಿಗೆ ತರುವಷ್ಟರಲ್ಲಿ ಬೆಳೆ ಬೆಂಕಿಗೆ ಆಹುತಿಯಾಗಿದೆ.

ಘಟನೆಯಲ್ಲಿ 5 ಲಕ್ಷ ನಷ್ಟ ಸಂಭವಿಸಿದೆ ಎಂದು ಮಾಲಕರು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಸೆಸ್ಕ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಗ್ರಾಮ ಲೆಕ್ಕಿಗರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News