ಮೈಸೂರು: ಆರೋಗ್ಯ ಸಚಿವರ ಹೇಳಿಕೆ ಖಂಡಿಸಿ ಏಕಾಂಗಿ ಪ್ರತಿಭಟನೆ
Update: 2018-12-16 18:09 GMT
ಮೈಸೂರು,ಡಿ.16: ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರ ಹೇಳಿಕೆ ಖಂಡಿಸಿ ನಗರದ ಗಾಂಧಿ ಪ್ರತಿಮೆ ಬಳಿ ವಕೀಲರೊಬ್ಬರು ಏಕಾಂಗಿ ಪ್ರತಿಭಟನೆ ನಡೆಸಿದರು.
ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪ್ರತಿಮೆ ಬಳಿ ವಕೀಲ ಪಡುವಾರಹಳ್ಳಿ ರಾಮಕೃಷ್ಣ ಅವರು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಉಡಾಫೆಯ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರು ಕೂಡಲೇ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.