ಆಶಿಕ್ ಕುಕ್ಕಾಜೆಗೆ ‘ಸೇವಾ ರತ್ನ’ ಪ್ರಶಸ್ತಿ ಪ್ರದಾನ

Update: 2018-12-17 15:27 GMT

ಬಂಟ್ವಾಳ, ಡಿ.17: ಯುವ ಸಾಮಾಜಿಕ ಕಾರ್ಯಕರ್ತ ಆಶಿಕ್ ಕುಕ್ಕಾಜೆ ಅವರಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಪೀಸ್ ಎವರ್ನೆಸ್ ಟ್ರಸ್ಟ್ (ರಿ.) ನಾಲ್ಕನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ 2018ನೆ ಸಾಲಿನ ‘ಸೇವಾ ರತ್ನ’ ಪ್ರಶಸ್ತಿಯನ್ನು ಪೀಸ್ ಎವರ್ನೆಸ್ ಟ್ರಸ್ಟ್ ಅಧ್ಯಕ್ಷ ಅಲ್ತಾಫ್ ಬಿಳಗುಳ ಜೇಸಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಿದರು.

ಸಾಮಾಜಿಕ ತಾಣಗಳಲ್ಲಿ ಬಡ ರೋಗಿಗಳ, ಅಶಕ್ತರ ಬಗ್ಗೆ ಬರೆಹಗಳನ್ನು ಬರೆಯುವ ಮೂಲಕ ಹಣ ಸಂಗ್ರಸಿ ಅರ್ಹ ರೋಗಿಗಳ ಚಿಕಿತ್ಸೆಗೆ ನೆರವು ನೀಡುವುದರ ಮೂಲಕ ಗಮನ ಸೆಳೆದಿರುವ ಆಶಿಕ್ ಕುಕ್ಕಾಜೆ ಅವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News