ಉಡುಪಿ ನಗರಸಭೆ: ಸಾರ್ವಜನಿಕ ಸಮಾಲೋಚನಾ ಕಾರ್ಯಾಗಾರ
Update: 2018-12-17 21:01 IST
ಉಡುಪಿ, ಡಿ.17: ಅಮೃತ್ ಮತ್ತು ಎಡಿಬಿ ಅನುದಾನದ ನೆರವಿನಲ್ಲಿ ಕ್ವಿಮಿಪ್ ಟ್ರಾಂಚ್-2 ಯೋಜನೆಯಡಿಯಲ್ಲಿ ದಿನದ 24 ಗಂಟೆ ಕುಡಿಯುವ ನೀರು ಒದಗಿಸುವ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಮತ್ತು ಈ ಯೋಜನೆಗಳ ಅನುಷ್ಠಾನದಿಂದಾಗುವ ಸಾಮಾಜಿಕ ಪರಿಣಾಮಗಳ ಬಗ್ಗೆ ಅಭಿಪ್ರಾಯ ಪಡೆಯುವ ಉದ್ದೇಶದಿಂದ ಡಿ.18ರಂದು ಬೆಳಗ್ಗೆ 11:30ಕ್ಕೆ ಮಣಿಪಾಲದ ಆರ್.ಎಸ್.ಬಿ. ಸಭಾಭವನದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ವಾರ್ಡ್ ಮಟ್ಟದ ಈ ಸಾರ್ವಜನಿಕ ಸಮಾಲೋಚನಾ ಕಾರ್ಯಗಾರವನ್ನು ಉಡುಪಿ ನಗರಸಭೆ ವ್ಯಾಪ್ತಿಯ ಸೆಟ್ಟಿಬೆಟ್ಟು, ಪರ್ಕಳ, ಈಶ್ವರ ನಗರ, ಮಣಿಪಾಲ, ಸಗ್ರಿ, ಇಂದ್ರಾಳಿ ವಾರ್ಡ್ಗಳಿಗೆ ಕೆಯುಐಡಿಎಫ್ಸಿ ಹಾಗೂ ಉಡುಪಿ ನಗರಸಭೆಯ ಸಹಯೋಗದೊಂದಿಗೆ ಆಯೋಜಿಸಿದ್ದು, ಸಾರ್ವಜನಿಕರು ಇದರಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ನಗರಸಬೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.