ಪ್ರತ್ಯೇಕ ಪ್ರಕರಣ: ಮಹಿಳೆ ಸಹಿತ ಮೂವರ ಆತ್ಮಹತ್ಯೆ

Update: 2018-12-18 17:07 GMT

ಕೋಟ, ಡಿ.18: ಹಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಬಸ್ರೂರು ಗ್ರಾಮದ ಕೊಳ್ಕೆರೆ ಜನತಾ ಕಾಲನಿ ನಿವಾಸಿ ವಿಠಲ ಶೆಟ್ಟಿ ಎಂಬವರ ಮಗ ಭರತ (28) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಡಿ.17ರಂದು ರಾತ್ರಿ ಯಡಾಡಿ ಮತ್ಯಾಡಿ ಗ್ರಾಮದ ಕಾಸನಮಕ್ಕಿ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ವಿಪರೀತ ಮದ್ಯಪಾನ ಸೇವಿಸುವ ಚಟ ಹೊಂದಿದ್ದ ಬೈಕಾಡಿ ಗ್ರಾಮದ ಗಾಂಧಿ ನಗರ ನಿವಾಸಿ ಬಸವ ಎಂಬವರ ಮಗ ದಯಾನಂದ(35) ಎಂಬವರು ಮಾನಸಿಕ ಅಸ್ವಸ್ಥರಾಗಿ ಡಿ.17ರಂದು ಬೆಳಗ್ಗೆ ಮನೆಯ ಚಾವಡಿಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವಕ್ವಾಡಿ ಗ್ರಾಮದ ನವ ನಗರ ನಿವಾಸಿ ಕೆ.ಸುಂದರ್ ಎಂಬವರ ಪತ್ನಿ ಮಾಲತಿ(45) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.17ರಂದು ರಾತ್ರಿ ಮನೆಯ ಅಡುಗೆ ಕೋಣೆಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News