ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2018-12-18 18:44 GMT

ಮಂಡ್ಯ, ಡಿ.18: ಬೈಕ್‍ಗೆ ಟಿಪ್ಪರ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಮದ್ದೂರು ಶಿವಪುರ ಬಳಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮದ ತೇಜೋಮೂರ್ತಿ(44) ಸಾವನ್ನಪ್ಪಿದ ಬೈಕ್ ಸವಾರನಾಗಿದ್ದು, ಈತ ಬೈಕ್‍ನ್ನು ಯೂಟರ್ನ್ ತೆಗೆದುಕೊಳ್ಳುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News