ಸಿಪಿಎಂ ರಾಜ್ಯ ಕಾರ್ಯದರ್ಶಿ ಸ್ಥಾನದಿಂದ ಜಿ.ವಿ.ಶ್ರೀರಾಮರೆಡ್ಡಿ ವಜಾ

Update: 2018-12-20 14:36 GMT

ಬೆಂಗಳೂರು, ಡಿ.20: ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ)ದ ರಾಜ್ಯ ಕಾರ್ಯದರ್ಶಿಯಾಗಿದ್ದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿರನ್ನು ಪಕ್ಷದ ಶಿಸ್ತು ಉಲ್ಲಂಘನೆ ಹಾಗೂ ಭ್ರಷ್ಟಾಚಾರದ ಆರೋಪದಡಿ ಪಕ್ಷದ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಲಾಗಿದೆ.

ಡಿ.15-16 ರಂದು ನಡೆದ ಸಿಪಿಎಂ ಪಕ್ಷದ ಕೇಂದ್ರ ಸಮಿತಿ ಸಭೆಯಲ್ಲಿ ಶ್ರೀರಾಮರೆಡ್ಡಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಭೆಯು ಸರ್ವಾನುಮತದಿಂದ ಅಂಗೀಕರಿಸಿ ಅವರನ್ನು ಪಕ್ಷದ ಎಲ್ಲ ಸ್ಥಾನಗಳಿಂದಲೂ ವಜಾಗೊಳಿಸಿದೆ. ಶ್ರೀರಾಮರೆಡ್ಡಿ ಸ್ಥಾನಕ್ಕೆ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಯು.ಬಸವರಾಜುರನ್ನು ಕೇಂದ್ರ ಸಮಿತಿ ಆಯ್ಕೆ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News