ನನ್ನನ್ನು ಸಚಿವನನ್ನಾಗಿ ಮಾಡಲು ಗೌಡರ ಕುಟುಂಬಕ್ಕೆ ಏನು ಸಮಸ್ಯೆ?: ಬಸವರಾಜ ಹೊರಟ್ಟಿ

Update: 2018-12-22 13:25 GMT

ಹುಬ್ಬಳ್ಳಿ/ಬೆಂಗಳೂರು ಡಿ.22: ನನ್ನನ್ನು ಸಚಿವನನ್ನಾಗಿ ಮಾಡಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಏನು ಸಮಸ್ಯೆ ಇದೆಯೋ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ನಾನು ಪಕ್ಷ ಸಂಘಟನೆ ಮಾಡಿಲ್ಲ ಎಂಬ ಆರೋಪಗಳಿವೆ. ಆದರೆ, ನನ್ನೊಬ್ಬನಿಂದಲೇ ಪಕ್ಷ ಬೆಳೆಸುವುದು ಆಗುವುದಿಲ್ಲ. ಅದಕ್ಕೆ ಎಲ್ಲರ ಸಹಕಾರವೂ ಬೇಕು ಎಂದು ನುಡಿದರು.

ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧವಾಗಿ ಇರುತ್ತೇನೆ. ನಾನು ಮೊದಲಿನಿಂದಲೂ ಪಕ್ಷದಲ್ಲಿ ನಿಷ್ಠೆಯಿಂದ ಇದ್ದೇನೆ. ಬಿಜೆಪಿ ಮತ್ತು ಕಾಂಗ್ರೆಸ್ ಎಷ್ಟೇ ಒತ್ತಾಯ ಮಾಡಿದರೂ ನಾನು ಪಕ್ಷ ತೊರೆದಿಲ್ಲ ಎಂದ ಅವರು, ಸಚಿವ ಸ್ಥಾನ ನೀಡುವ ಬಗ್ಗೆ ಇದುವರೆಗೂ ಯಾವುದೇ ಅಂತಿಮ ನಿರ್ಧಾರ ಆಗಿಲ್ಲ. ಸರಿಯಾಗಿ ವಿಚಾರ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆಯಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News