ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ಕಟ್ಟಾ ಸುಬ್ರಮಣ್ಯ ನಾಯ್ಡು ನೇಮಕ
Update: 2018-12-22 16:01 GMT
ಬೆಂಗಳೂರು, ಡಿ.22: ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ, ಓಬಿಸಿ ಮೋರ್ಚಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.
ಅದೇ ರೀತಿ, ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಪ್ರಮೋದ್ ಹೆಗಡೆ ಮತ್ತು ಬೆಳಗಾವಿಯ ಬಿ.ಮಾರುತಿ ಜಿರಲಿ ಅವರನ್ನು ಬಿಜೆಪಿ ರಾಜ್ಯ ವಕ್ತಾರರನ್ನಾಗಿ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.