ಡಿ.30ಕ್ಕೆ ‘ಜನಪದ ನಾಯಕ ಡಾ.ರಾಜಕುಮಾರ್’ ಪುಸ್ತಕ ಲೋಕಾರ್ಪಣೆ

Update: 2018-12-22 16:29 GMT

ಬೆಂಗಳೂರು, ಡಿ.22: ಜನ ಪ್ರಕಾಶನ ವತಿಯಿಂದ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ರಚಿಸಿರುವ ‘ಜನಪದ ನಾಯಕ ಡಾ.ರಾಜಕುಮಾರ್’ ಪುಸ್ತಕವನ್ನು ಡಿ.30ರಂದು ಬೆಳಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಲೋಕಾರ್ಪಣೆ ಮಾಡಲಾಗುತ್ತದೆ.

ಪುಸ್ತಕವನ್ನು ಡಾ.ಎಚ್.ಎಸ್.ರಾಘವೇಂದ್ರರಾವ್ ಲೋಕಾರ್ಪಣೆ ಮಾಡಲಿದ್ದು, ಮುಖ್ಯ ಅತಿಥಿಯಾಗಿ ತಾರಾ ಅನೂರಾಧ ಆಗಮಿಸಲಿದ್ದಾರೆ. ರಾಘವೇಂದ್ರ ರಾಜಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಹಾಗೂ ಕಾರ್ಯಕ್ರಮದಲ್ಲಿ ಡಾ.ರಾಜಕುಮಾರ್ ಚಿತ್ರ ಗೀತೆಗಳ ಗಾಯನವನ್ನು ಡಾ.ಸಮಿತಾ ಮಲ್ನಾಡ್ ನಡೆಸಿಕೊಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News