​ಬಿಜೆಪಿ ಮುಳುಗುತ್ತಿರುವ ಹಡಗು: ಸಿದ್ದರಾಮಯ್ಯ

Update: 2018-12-23 17:20 GMT

ಬಾಗಲಕೋಟೆ, ಡಿ.23: ಬಿಜೆಪಿ ಪಕ್ಷವೂ ಮುಳುಗುತ್ತಿರುವ ಹಡಗು. ಅಲ್ಲಿಗೆ ಯಾರಾದರೂ ಹೋಗುವುದು ಸಾಧ್ಯವೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.

ರವಿವಾರ ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಒಂದು ಕೋಮುವಾದಿ ಪಕ್ಷ. ಈಗ ಆ ಪಕ್ಷ ಸೋಲಿನ ದವಡೆಯಲ್ಲಿ ಸಿಲುಕಿ ನಲುಗುತ್ತಿದೆ. ಯಾರಾದರೂ, ಮುಳುಗು ಹಡಗು ಬಿಜೆಪಿಗೆ ಹೋಗುತ್ತಾರಾ. ಅದರಲ್ಲಿ ಯಾರಾದರೂ ಕುಳಿತುಕೊಳ್ತಾರಾ ಎಂದು ಪ್ರಶ್ನಿಸಿದರು. ಸಚಿವ ಸ್ಥಾನಕ್ಕೆ ಬಹಳ ಜನ ಆಕಾಂಕ್ಷಿಗಳಿದ್ದಾಗ ಕೆಲವರಿಗೆ ಅಸಮಾಧಾನ ಆಗುವುದು ಸಹಜ ಎಂದ ಅವರು, ಕಾಂಗ್ರೆಸ್‌ನ ಎಲ್ಲ ಶಾಸಕರು ಮಂತ್ರಿ ಸ್ಥಾನ ಪಡೆಯುವ ಅರ್ಹತೆ ಹೊಂದಿದ್ದಾರೆ. ಆದರೆ, ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಾಲಿಗೆ ಉಳಿದಿದ್ದು ಕೇವಲ ಆರು ಸ್ಥಾನಗಳು ಮಾತ್ರ. ಇಪ್ಪತ್ತು ಜನ ಆಕಾಂಕ್ಷಿಗಳಾಗಿದ್ದರು. ಅವರನ್ನೆಲ್ಲಾ ಮಂತ್ರಿ ಮಾಡೋಕೆ ಹೇಗೆ ಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದರು.

 ಮತ್ತೆ ಸಚಿವ ಸಂಪುಟ ಪುನಾರಚನೆ 

ಲೋಕಸಭಾ ಚುನಾವಣೆ ಬಳಿಕ ಮತ್ತೆ ಸಚಿವ ಸಂಪುಟ ಪುನಾರಚನೆ ಮಾಡಲಾಗುತ್ತದೆ. ಸಚಿವರ ಕಾರ್ಯವೈಖರಿ ಗಮನಿಸಿ ಸಚಿವ ಸಂಪುಟ ಪುನಾರಚನೆ ಮಾಡಲಾಗುವುದು.

-ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News