ಸಜಿಪನಡು: ಆದರ್ಶ್ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Update: 2018-12-24 11:55 GMT

ಬಂಟ್ವಾಳ, ಡಿ. 24: ಸಜಿಪನಡು ಆದರ್ಶ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವವು ಇತ್ತೀಚೆಗೆ ನಡೆಯಿತು.

ದ.ಕ. ಜಿಲ್ಲಾ ವಕ್ಫ್ ಬೋರ್ಡ್ ಇದರ ಮಾಜಿ ಅಧ್ಯಕ್ಷ ಎಸ್.ಅಬೂಬಕರ್ ಶಾಲಾ ಧ್ವಜಾರೋಹಣವನ್ನು ನೆರವೇರಿಸಿದರು. ಶ್ರೀರಾಮ ಕ್ಷೇತ್ರ ಕನ್ಯಾಡಿಯ ಶ್ರೀಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳ ಕಲಿಕೆಗೆ ಶಿಕ್ಷಕರ ಜೊತೆ ಪೋಷಕರ ಪಾಲೂ ಮಹತ್ತರವಾಗಿದೆ ಎಂದು ನುಡಿದರು. 

ಶಾಲಾ ಸಂಚಾಲಕ ಎಸ್. ಅಬ್ಬಾಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಗೆ ನಮ್ಮ ಸಂಸ್ಥೆಯು ಉಚಿತ ಶಿಕ್ಷಣವನ್ನು ನೀಡುತ್ತಾ ಬಂದಿದೆ ಎಂದು ತಿಳಿಸಿದರು.

ಅಮ್ಮೆಂಬಳ ಚರ್ಚ್ ಚೇಳೂರು ಇದರ ಧರ್ಮಗುರು ರೆವರೆಂಡ್ ಫಾದರ್ ಲಾರೆನ್ಸ್ ಮಸ್ಕರೇನಸ್, ಕಲಾವಿದ ಮಂಜು ರೈ ಮೂಳೂರು, ಉಡುಪಿ ಇಂಗ್ಲಿಷ್ ಮೀಡಿಯಂ ಶಾಲಾ ಸಂಘದ ಅಧ್ಯಕ್ಷ ಮುಹಮ್ಮದ್ ಬ್ಯಾರಿ, ತಾಲೂಕು ಪಂಚಾಯತ್ ಸದಸ್ಯೆ ಸವಿತಾ ಹೇಮಂತ್ ಕರ್ಕೇರಾ, ಸಜಿಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ನಾಸೀರ್ ಸಜಿಪ, ಅಝೀಝ್, ರಫೀಕ್ ಗೋಳಿಪಡ್ಪು, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಕಿಶೋರ್ ದೇರಾಜೆ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಸ್ವಾಗತಿಸಿ, ಸಹಶಿಕ್ಷಕಿ ಚಿತ್ರಾ ವಂದಿಸಿದರು, ಸಹಶಿಕ್ಷಕಿ ಕಾವ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News