ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಮೃತ್ಯು

Update: 2018-12-24 18:24 GMT

ಮಂಡ್ಯ, ಡಿ.24: ಜಿಲ್ಲೆಯ ವಿವಿಧೆಡೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಕೆ.ಆರ್.ಪೇಟೆ ತಾಲೂಕು ಗಂಗೇನಹಳ್ಳಿಯ ಕಾಂಗ್ರೆಸ್ ಮುಖಂಡ ಸುನಿಲ್‍ ಕುಮಾರ್(39) ಹಾಗೂ ಮಂಡ್ಯ ತಾಲೂಕು ಮಾರಗೌಡನಹಳ್ಳಿಯ ಶಿವಮಾದು(25) ಸಾವನ್ನಪ್ಪಿದವರು.

ಕೆ.ಆರ್.ಪೇಟೆ ತಾಲೂಕು ಲಕ್ಷ್ಮೀಪುರ ಗೇಟ್ ಬಳಿ ಲಾರಿ ಢಿಕ್ಕಿ ಹೊಡೆದು ಸುನಿಲ್‍ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಿಕ್ಕೇರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಮದ್ದೂರು ಮಳವಳ್ಳಿ ರಸ್ತೆಯ ಉಪ್ಪಿನಕೆರೆ ಗೇಟ್ ಬಳಿ ರವಿವಾರ ತಡರಾತ್ರಿ ಅಪರಿಚಿತ ವಾಹನ ಹರಿದು ಮಾರಗೌಡನಹಳ್ಳಿ ಶಿವಮಾದು ಸಾವನ್ನಪ್ಪಿದ್ದಾರೆ.
ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News