ಮಂತ್ರಿ ಸ್ಥಾನದ ನಿರೀಕ್ಷೆ ಹುಸಿಯಾದಾಗ ಅಸಮಾಧಾನ ಸಹಜ: ಕುಮಾರಸ್ವಾಮಿ

Update: 2018-12-24 18:31 GMT

ಬಾಗಲಕೋಟೆ, ಡಿ.24: ಮಂತ್ರಿ ಸ್ಥಾನದ ನಿರೀಕ್ಷೆಗಳು ಹುಸಿಯಾಗಿ ನಿರಾಶೆಯಾದಾಗ ಅಸಮಾಧಾನ ಆಗುವುದು ಸಹಜ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಸೋಮವಾರ ನಗರದ ತೋಟಗಾರಿಕೆ ವಿಶ್ವವಿದ್ಯಾಲಯದ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ನನ್ನ ಆತ್ಮೀಯ ಸ್ನೇಹಿತ. ರಾಮಲಿಂಗಾರೆಡ್ಡಿ ಅವರೊಂದಿಗೂ ಮಾತನಾಡಿರುವೆ. ಅಸಮಾಧಾನ ಸರಿಪಡಿಸುವ ಸಾಮರ್ಥ್ಯ ಕಾಂಗ್ರೆಸ್ ಪಕ್ಷದ ನಾಯಕರಿಗೂ ಇದೆ ಎಂದು ಹೇಳಿದರು.

ಸಂಪುಟ ವಿಸ್ತರಣೆ ಬಗ್ಗೆ ನಮ್ಮ ಪಕ್ಷದ ಶಾಸಕರಲ್ಲಿ ಯಾರಿಗೂ ಅಸಮಾಧಾನವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಮುಂದಿನ ತಿಂಗಳು ಸಂಪುಟ ವಿಸ್ತರಣೆ ಮಾಡುವುದಾಗಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News