ಒಂದೂವರೆ ವರ್ಷದಿಂದ ಸಂಬಳ ನೀಡದ ಗ್ರಾ.ಪಂ.: ಸೀಮೆ ಎಣ್ಣೆ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕಾರ್ಮಿಕ

Update: 2018-12-25 14:55 GMT

ಗದಗ, ಡಿ.25: ಕಳೆದ ಒಂದೂವರೆ ವರ್ಷದಿಂದ ಸಂಬಳ ನೀಡದ ಹಿನ್ನೆಲೆಯಲ್ಲಿ ಮನನೊಂದು ಗ್ರಾಮ ಪಂಚಾಯತ್ ಕಾರ್ಮಿಕನೋರ್ವ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾದ ಘಟನೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪಗ್ರಾಮ ಪಂಚಾಯತ್ ಬಳಿ ನಡೆದಿದೆ. 

ಸುಗನಹಳ್ಳಿ ಗ್ರಾಮದ ರಮೇಶ ತಳವಾರ (32) ಆತ್ಮಹತ್ಯೆಗೆ ಯತ್ನಿಸಿದ ಕಾರ್ಮಿಕ. ರಮೇಶ ತಳವಾರ ಗ್ರಾಮ ಪಂಚಾಯತ್ ನಲ್ಲಿ ವಾಟರ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಬನ್ನಿಕೊಪ್ಪ ಗ್ರಾಮ ಪಂಚಾಯತ್ ಒಂದೂವರೆ ವರ್ಷದಿಂದ ಈತನಿಗೆ ಸಂಬಳ ನೀಡಿರಲಿಲ್ಲ ಎನ್ನಲಾಗಿದ್ದು, ಇದರಿಂದ, ಮನನೊಂದು ಮಂಗಳವಾರ ರಮೇಶ್, ಸೀಮೆಎಣ್ಣೆ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಅಸ್ವಸ್ಥಗೊಂಡ ಕಾರ್ಮಿಕನನ್ನು ರಕ್ಷಿಸಿ, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News