×
Ad

ಟೆಂಪೋ ಢಿಕ್ಕಿ: ಪಾದಾಚಾರಿ ಮೃತ್ಯು

Update: 2018-12-26 22:26 IST

ಉಡುಪಿ, ಡಿ.26: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಅತಿವೇಗದಿಂದ ಬಂದ ಟೆಂಪೋ ಟ್ರಾವಲ್ಲರ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಕೆ.ಜಿ.ರೋಡ್ ಬಸ್ ನಿಲ್ದಾಣದಲ್ಲಿ ನಡೆದಿದೆ.

ಸುರೇಶ್ ರಾವ್ ಎಂಬವರು ಉಪ್ಪೂರು ಗ್ರಾಮದ ಕೆಜಿ ರೋಡ್‌ನ ಉಡುಪಿ -ಕುಂದಾಪುರ ರಾ. ಹೆದ್ದಾರಿ ಪಕ್ಕದಲ್ಲಿ ರಸ್ತೆ ದಾಟಲು ನಿಂತಿದ್ದು, ಆಗ ಬ್ರಹ್ಮಾವರ ಕಡೆಯಿಂದ ವೇಗವಾಗಿ ಧಾವಿಸಿ ಬಂದ ಟೆಂಪೊ, ರಸ್ತೆಯ ತೀರಾ ಎಡಬದಿಗೆ ಬಂದು ಸುರೇಶ್ ಅವರಿಗೆ ಢಿಕ್ಕಿ ಹೊಡೆದಿತ್ತು. ಇದರಿಂದ ತಲೆ, ಭುಜ, ಕುತ್ತಿಗೆದೆ ತೀವ್ರವಾಗಿ ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು 6:50ರ ಸುಮಾರಿಗೆ ಮೃತಪಟ್ಟರು.

ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News