ಮಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

Update: 2018-12-27 06:15 GMT

ಮಂಗಳೂರು, ಡಿ. 27: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ರಾಜ್ಯಪಾಲ ವಾಜುಭಾಯಿ ರುಡಾಭಾಯಿ ವಾಲಾ ಅವರು ಸ್ವಾಗತಿಸಿದರು.

ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಕುಮಾರ್, ಪೊಲೀಸ್ ಆಯುಕ್ತರು ಟಿ.ಆರ್. ಸುರೇಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿಕಾಂತೇ ಗೌಡ, ಸಚಿವ ಯು.ಟಿ. ಖಾದರ್,  ಡಿಸಿಪಿ ಉಮಾಪ್ರಶಾಂತ್, ಸಹಾಯಕ ಕಮೀಷನರ್ ರವಿಚಂದ್ರ ನಾಯಕ್, ಜಿಲ್ಲಾ ಉಸ್ತುವಾರಿ ಮೇಯರ್ ಭಾಸ್ಕರ ಮೊಯ್ಲಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಹಾನಗರಪಾಲಿಕೆ  ಆಯಕ್ತರಾದ ಮುಹಮ್ಮದ್ ನಝೀರ್, ಡಿ.ಡಿ.ಎಲ್.ಆರ್. ಕುಸುಮಾಧರ ಅವರು ಉಪಸ್ಥಿತರಿದ್ದರು.

ರಾಷ್ಟ್ರಪತಿ ವಿಮಾನದಿಂದ ಇಳಿದು ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News