ಪಕ್ಷದ ತೀರ್ಮಾನಕ್ಕೆ ನಾನು ಬದ್ಧ: ಡಾ.ಜಿ.ಪರಮೇಶ್ವರ್

Update: 2018-12-27 15:53 GMT

ಬೆಂಗಳೂರು, ಡಿ.27: ಕಳೆದ ಬಾರಿ ಪಕ್ಷ ಅಧಿಕಾರದಲ್ಲಿದ್ದಾಗಲೂ ಅಧಿಕಾರಕ್ಕಾಗಿ ನಾನು ಆಸೆ ಪಟ್ಟವನಲ್ಲ. ನನಗೆ ತ್ಯಾಗ ಎನ್ನುವುದೂ ಹೊಸತೇನಲ್ಲ. ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೆಯೇ ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಅವರು ಬೇರೆಯವರ ಸಂಪರ್ಕಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಖಾತೆ ಹಂಚಿಕೆ ಹಗ್ಗ ಜಗ್ಗಾಟಕ್ಕೆ ಸಂಬಂಧಿಸಿದ ವಿಚಾರವಾಗಿ ಬುಧವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆ ವಿಫಲವಾಗಿತ್ತು ಎನ್ನಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News