ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ನೂತನ ಪದಾಧಿಕಾರಿಗಳ ಆಯ್ಕೆ
ಬಂಟ್ವಾಳ,ಡಿ.28: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್) ಬಂಟ್ವಾಳ ಡಿವಿಷನ್ ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ಬಿಸಿ ರೋಡಿನ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷ ಸೆರ್ಕಳ ಇಬ್ರಾಹಿಂ ಸಖಾಫಿ ಪ್ರಾರ್ಥಿಸಿ, ಡಿವಿಷನ್ ಮಾಜಿ ಅಧ್ಯಕ್ಷ ಟಿ.ಕೆ ಇಸ್ಮಾಯಿಲ್ ಸಅದಿ ಉಧ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿವಿಷನ್ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ವಗ್ಗ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಆಬಿದ್ ನಈಮಿ ವರದಿ ವಾಚಿಸಿದರು. ಕೋಶಾಧಿಕಾರಿ ರಫೀಕ್ ಝುಹ್ರಿ ಲೆಕ್ಕಪತ್ರ ಮಂಡಿಸಿದರು.
ಬಳಿಕ ಡಿವಿಶನ್ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಅಲಿ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಹಾರಿಸ್ ಪೆರಿಯಪಾದೆ ಆಯ್ಕೆಯಾದರು. ಕೋಶಾಧಿಕಾರಿಯಾಗಿ ಅಲಿ ಮದನಿ ಸೆರ್ಕಳ ಹಾಗೂ ಕ್ಯಾಂಪಸ್ ಕಾರ್ಯದರ್ಶಿಯಾಗಿ ಮೌಸೂಫ್ ಅಬ್ದುಲ್ಲ ಅವರನ್ನೊಳಗೊಂಡ 21 ಸದಸ್ಯರ ಕಾರ್ಯಾಕಾರಿ ಸಮಿತಿಯನ್ನು ರಚಿಸಲಾಯಿತು.
ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮಂಜನಾಡಿ ವೀಕ್ಷಕರಾಗಿ ಆಗಮಿಸಿದ್ದರು. ಜಿಲ್ಲಾ ಸದಸ್ಯ ಅಬ್ದುಲ್ ಮಜೀದ್ ಸಖಾಫಿ ಸಂಘಟನಾ ತರಗತಿ ನಡೆಸಿದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕಾರ್ಯದರ್ಶಿ ಶರೀಫ್ ನಂದಾವರ, ಸದಸ್ಯ ಜಬ್ಬಾರ್ ಕಣ್ಣೂರು ಉಪಸ್ಥಿತರಿದ್ದರು. ಹಾರಿಸ್ ಪೆರಿಯಪಾದೆ ವಂದಿಸಿದರು.