ಮಂಜೇಶ್ವರ : ರಸ್ತೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Update: 2018-12-29 14:16 GMT
ಮಂಜೇಶ್ವರ, ಡಿ. 29: ಕರ್ನಾಟಕ ಸಾರಿಗೆ ಇಲಾಖೆಯ ಬಸ್ - ಸ್ಕೂಟರ್ ಢಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಮೃತಪಟ್ಟು, ಸಹಸವಾರ ಬಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ವರದಿಯಾಗಿದೆ.
ಮೃತರನ್ನು ಮಂಜೇಶ್ವರ ಉದ್ಯಾವರ ಸಮೀಪದ ಅಬ್ದುಲ್ ಖಾದರ್ ಎಂಬವರ ಪುತ್ರ ಮುಹಮ್ಮದ್ ಅಬ್ದುಲ್ ಬಾಶಿತ್ (22) ಎಂದು ಗುರುತಿಸಲಾಗಿದೆ.
ಇಂದು ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ಶಿರಿಯಾ ಬಳಿ ಈ ಅಪಘಾತ ಸಂಭವಿಸಿದ್ದು, ಬಾಶಿತ್ ಚಲಾಯಿಸುತ್ತಿದ್ದ ಸ್ಕೂಟರ್ ಎದುರಿನಿಂದ ಬರುತ್ತಿದ್ದ ಬಸ್ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಬಾಶಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ. ಜೊತೆಗಿದ್ದ ಬಾಲಕ ಗಂಭೀರ ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.