ಪ್ರವಾದಿ ನಿಂದನೆ ಆರೋಪ: ಎಸ್ಸೆಸ್ಸೆಫ್ ಬಂಟ್ವಾಳ ಸೆಕ್ಟರ್, ಡಿವಿಶನ್ ನಿಂದ ದೂರು ದಾಖಲು

Update: 2018-12-29 17:00 GMT

ಬಂಟ್ವಾಳ,ಡಿ.29: ಟಿವಿ ಚರ್ಚೆಯ ವೇಳೆ ಪ್ರವಾದಿ (ಸ) ರನ್ನು ನಿಂದಿಸಿದ್ದಾರೆಂದು ಆರೋಪಿಸಿ ಖಾಸಗಿ ಚಾನೆಲ್ ನ ಅಜಿತ್ ಹನುಮಕ್ಕರ್ ವಿರುದ್ಧ ಎಸ್ಸೆಸ್ಸೆಫ್ ಬಂಟ್ವಾಳ ಡಿವಿಶನ್ ವತಿಯಿಂದ ಬಿ.ಸಿ ರೋಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ಅಧ್ಯಕ್ಷ ಅಕ್ಬರ್ ಅಲಿ ಮದನಿ, ಪ್ರಧಾನ ಕಾರ್ಯದರ್ಶಿ ಹಾರಿಸ್ ಪೆರಿಯಪಾದೆ, ಕ್ಯಾಂಪಸ್ ಕಾರ್ಯದರ್ಶಿ ಮೌಸೂಫ್ ಅಬ್ದುಲ್ಲ ಜಿಲ್ಲಾ ಕಾರ್ಯದರ್ಶಿ ಶರೀಫ್ ನಂದಾವರ, ಜಿಲ್ಲಾ ಸದಸ್ಯ ರಶೀದ್ ವಗ್ಗ, ಡಿವಿಷನ್ ಸದಸ್ಯರಾದ ರಹ್ಮತುಲ್ಲ ಸಿದ್ದೀಕ್, ಇರ್ಶಾದ್ ಗೂಡಿನಬಳಿ ಹಾಗೂ ಫಾಮಿದ್ ನಂದಾವರ ಉಪಸ್ಥಿತರಿದ್ದರು.

ಬಂಟ್ವಾಳ ಸೆಕ್ಟರ್: ಪ್ರವಾದಿ (ಸ) ರನ್ನು ನಿಂದಿಸಿದ್ದಾರೆಂದು ಆರೋಪಿಸಿ ಸುವರ್ಣ ಚಾನೆಲ್ ನ ಅಜಿತ್ ಹನುಮಕ್ಕರ್ ವಿರುದ್ಧ ಎಸ್ಸೆಸ್ಸೆಫ್ ಬಂಟ್ವಾಳ ಸೆಕ್ಟರ್  ವತಿಯಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯಿತು.

ಈ ಸಂದರ್ಭ ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ಮಾಜಿ ಅಧ್ಯಕ್ಷ ರಶೀದ್ ಹಾಜಿ ವಗ್ಗ, ಬಂಟ್ವಾಳ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಾರಿಸ್ ಪೆರಿಯಪಾದೆ, ಬಂಟ್ವಾಳ ಸೆಕ್ಟರ್ ಉಪಾಧ್ಯಕ್ಷ ಶರೀಫ್ ಮಾವಿನಕಟ್ಟೆ, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಸಂಶುದ್ದೀನ್ ಪೆರಾಳ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News