ಪ್ರವಾದಿ ನಿಂದನೆ: ಎಸ್ಕೆಎಸ್ಸೆಸ್ಸೆಫ್ ಬೆಳ್ತಂಗಡಿ ವಲಯ ಸಮಿತಿ ಖಂಡನೆ

Update: 2018-12-30 10:09 GMT

ಬೆಳ್ತಂಗಡಿ, ಡಿ. 30: ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮನಕ್ಕವರ್ ಪ್ರವಾದಿ ಮುಹಮ್ಮದ್ (ಸ ಅ) ಅವರನ್ನು ನಿಂದನಾತ್ಮಕವಾಗಿ ಪ್ರಸ್ತಾಪಿಸಿ ಮತ್ತು ಮುಸ್ಲಿಂ ಸಮಾಜವನ್ನು ಬಾಂಬ್ ಹಾಕುವವರೆಂದು ಚಿತ್ರೀಕರಿಸಿ ಸಮಾಜದ ಮನಸ್ಸಿಗೆ ಘಾಸಿಯನ್ನು ಉಂಟು ಮಾಡಿದ್ದು, ಎಸ್ಕೆಎಸ್ಸೆಸ್ಸೆಫ್ ಬೆಳ್ತಂಗಡಿ ವಲಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷರಾದ ನಝೀರ್ ಅಝ್ಹರಿ ತಿಳಿಸಿದ್ದಾರೆ.

 ಅಜಿತ್ ವಿರುದ್ಧ ಸ್ವಯಂ ಪ್ರೇರಿತ ಕೇಸು ದಾಖಲಿಸಿ, ಬಂಧಿಸಬೇಕು ಮತ್ತು ನಾಡಿನಲ್ಲಿ ಶಾಂತಿ ಸಾಮರಸ್ಯ ಹಾಳು ಮಾಡುತ್ತಿರುವ ಧರ್ಮ ಧರ್ಮದ ಮಧ್ಯೆ  ದ್ವೇಷ ಹರಡತ್ತಿರುವ ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಸ್ಕೆಎಸ್ಸೆಸ್ಸೆಫ್ ಬೆಳ್ತಂಗಡಿ ವಲಯ ಸಮಿತಿ ಒತ್ತಾಯಿಸುತ್ತದೆ ಎಂದು ನಝೀರ್ ಅಝ್ಹರಿ ಮತ್ತು ಕಾರ್ಯದರ್ಶಿ ರಿಯಾಝ್ ಫೈಝಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News