×
Ad

ನಾಳೆ ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ನಿಷೇಧ ಮಸೂದೆ ಮಂಡನೆ

Update: 2018-12-30 18:54 IST

ಹೊಸದಿಲ್ಲಿ, ಡಿ.30: ವಿವಾದಾಸ್ಪದ ತ್ರಿವಳಿ ತಲಾಖ್  ನಿಷೇಧ ಮಸೂದೆ ರಾಜ್ಯ ಸಭೆಯಲ್ಲಿ ಸೋಮವಾರ ಮಂಡನೆಯಾಗಲಿದ್ದು, ವಿಪಕ್ಷ ಕಾಂಗ್ರೆಸ್ ಈ ಮಸೂದೆ ಅಂಗೀಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಕಾನೂನು ಸಚಿವ ರವಿಶಂಕರ್ ಪ್ರಸಾದ್ ತ್ರಿವಳಿ ತಲಾಖ್ ನಿಷೇಧಿಸುವ ಮಸೂದೆಯನ್ನು  ರಾಜ್ಯಸಭೆಯಲ್ಲಿ ಮಂಡಿಸಲಿದ್ದಾರೆ. ಬಿಜೆಪಿ ಈ  ವೇಳೆ ತನ್ನ ಎಲ್ಲ ಸದಸ್ಯರು ಹಾಜರಿರುವಂತೆ ವಿಪ್ ಜಾರಿಗೊಳಿಸಿದೆ.

ಲೋಕಸಭೆಯು ಧ್ವನಿಮತದ ಮೂಲಕ  ಗುರುವಾರ  ತ್ರಿವಳಿ ತಲಾಖ್ ನಿಷೇಧಿಸುವ  ಮಸೂದೆ  ಒಪ್ಪಿಗೆ ನೀಡಿದ್ದು,  ರಾಜ್ಯಸಭೆಯಲ್ಲಿ ಅಂಗೀಕಾರಗೊಂಡರೆ ಈ ಮಸೂದೆ  ಕಾಯ್ದೆಯಾಗಿ ಜಾರಿಗೆ ಬರಲಿದೆ .

ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ನಿಷೇಧ  ಮಸೂದೆ ಅಂಗೀಕಾರಗೊಳ್ಳದಂತೆ ಕಾಂಗ್ರೆಸ್  ಹೋರಾಟ ನಡೆಸಲಿದೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News