'ಕುದುರೆ ಏರಲಾರದವನು ಶೂರನೂ ಅಲ್ಲ, ಧೀರನೂ ಅಲ್ಲ......

Update: 2018-12-31 08:04 GMT

ಮೈಸೂರು, ಡಿ.31: ಮಾಜಿ ಮುಖ್ಯ ಮಂತ್ರಿ ಡಿ.ವಿ ಸದಾನಂದ ಗೌಡ  ಮತ್ತು ಸಿದ್ದರಾಮಯ್ಯ ನಡುವೆ ಟ್ವಿಟರ್ ವಾರ್ ಶುರುವಾಗಿದೆ. ಡಿ.ವಿ. ಸದಾನಂದ ಗೌಡರು ಟ್ವಿಟರ್ ನಲ್ಲಿ ನೀಡಿದ ಹೇಳಿಕೆಗೆ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

ಡಿ.ವಿ. ಸದಾನಂದ ಗೌಡರು ಟ್ವಿಟರ್ ನಲ್ಲಿ “ ಮಾನ್ಯ ಸಿದ್ದರಾಮಯ್ಯನವರೇ , ನಿಮ್ಮರಾಜಕಾರಣದ ಬಗ್ಗೆ ಟೀಕೆ ಮಾಡಿದಾಗ ಸ್ಪರ್ಧಾತ್ಮಕ ವಾಗಿ ತೆಗೆದುಕ್ಕೊಳ್ಳಲಾಗದಷ್ಟು ಅಸಹನೆ ನಿಮಗೆ ಶುರುವಾಗಿದ್ದು ಯಾವಾಗ. ಚಾಮುಂಡೇಶ್ವರಿ ಸೋಲಿನ ಪರಿಣಾಮವೇ ?, ಅಥವಾ ಮುಖ್ಯಮಂತ್ರಿ ಕುರ್ಚಿ ಕಳೆದುಕೊಂಡ ಮನೋಸ್ಥಿತಿಯೇ ?",

"ಕುದುರೆ ಏರಲಾರದವನು ಧೀರನೂ ಅಲ್ಲ ಶೂರನೂ ಅಲ್ಲ. ನಿಮ್ಮ ಪಕ್ಷದ ಹುಳುಕು ಮುಚ್ಚಿ ಹಾಕಿಕ್ಕೊಳ್ಳಲು ಇದೊಂದು ಹೊಸ ಪ್ರಹಸನ . ಮುಲಾಜಿನ ಸರಕಾರ ನಡೆಸಲು ಮುಖ್ಯಮಂತ್ರಿಗಳಿಗೆ ಕೈ ಜೋಡಿಸಿ , ಕನ್ನಡಿಗರು ಮುಗ್ದರು ಮೂರ್ಖರಲ್ಲ ನಿಮ್ಮ ಗಿಲೀಟು ಮಾತು ನಂಬಲು" ಎಂಬ ಟ್ವೀಟ್ ಬೆನ್ನಲ್ಲೆ ಸಿದ್ದರಾಮಯ್ಯ ಅಷ್ಟೇ ತೀಕ್ಣವಾಗಿ ತಿರುಗೇಟು ನೀಡಿದ್ದಾರೆ.

“@DVSBJP ಅವರೇ, ನಿಮ್ಮ ಅನುಭವವನ್ನು ಸರಿಯಾಗಿ ಹೇಳಿದ್ದೀರಿ, 'ಕುದುರೆ ಏರಲಾರದವನು ಶೂರನೂ ಅಲ್ಲ, ಧೀರನೂ ಅಲ್ಲ...' ಎಷ್ಟೆಂದರೂ , ಹನ್ನೊಂದು ತಿಂಗಳಲ್ಲಿಯೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಓಡಿಹೋದವರಲ್ವೇ ನೀವು" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News