ಪ್ರವಾದಿ ನಿಂದನೆ: ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ನಿಂದ ದೂರು

Update: 2018-12-31 07:12 GMT

ಉಳ್ಳಾಲ, ಡಿ.31: ಪ್ರವಾದಿ ಮುಹಮ್ಮದ್ (ಸ.)ರನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರ್ ಹಾಗೂ ಸುವರ್ಣ ನ್ಯೂಸ್ ಚಾನೆಲ್ ವಿರುದ್ದ ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ವತಿಯಿಂದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.

ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ಅಧ್ಯಕ್ಷ ಜಲೀಲ್ ಫರೀದ್ ನಗರ  ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದ್ದು, ಈ ವೇಳೆ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಫಲ್ ಫರೀದ್ ನಗರ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ, ಅಬೂಸ್ವಾಲಿಹ್, ಬದ್ರುದ್ದೀನ್, ಅಬೂಬಕರ್, ಫೈಝಲ್, ಮುನೀರ್, ಸ್ವದಖಾ, ಇಸ್ಮಾಯಿಲ್, ರೀಯಾಝ್, ಶಾಹುಲ್ ಹಮೀದ್, ಅಲ್ತಾಫ್ ಫಾಳಿಲಿ, ಇಕ್ಬಾಲ್ ಮದನಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News