ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಸೆರೆ

Update: 2018-12-31 17:46 GMT

ಕಡಬ, ಡಿ.31. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿರುವ ಕಡಬ ಠಾಣಾ ಪೊಲೀಸರು ಸೋಮವಾರದಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಕುರುಬರ ಕೇರಿ ಜಾಲು ನಿವಾಸಿ ರವೀಂದ್ರ ಆಚಾರ್ಯ (26) ಎಂದು ಗುರುತಿಸಲಾಗಿದೆ.

ಠಾಣಾ ವ್ಯಾಪ್ತಿಯ ಕುಂತೂರು ಮೂಲದ ಬಾಲಕಿಯೋರ್ವಳು ಡಿ. 12 ರಂದು ನಾಪತ್ತೆಯಾಗಿದ್ದು, ಆ ಬಳಿಕ ಪುತ್ತೂರಿನಲ್ಲಿ ಪತ್ತೆ ಹಚ್ಚಲಾಗಿತ್ತು. ಆರೋಪಿ ರವೀಂದ್ರ ಆಚಾರ್ಯ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಬಾಲಕಿ ನೀಡಿದ ಮಾಹಿತಿಯಂತೆ ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಕಡಬ ಪೊಲೀಸರು ಸೋಮವಾರದಂದು ಆರೋಪಿಯನ್ನು ಬೆಂಗಳೂರಿನ ರಾಜಾಜಿನಗರದಲ್ಲಿ ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News