ಗಂಗೊಳ್ಳಿ: ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಲಾರಿ; ಸವಾರ ಮೃತ್ಯು

Update: 2019-01-02 09:52 GMT

ಗಂಗೊಳ್ಳಿ, ಜ.2: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಪೂರ್ವಾಹ್ನ ಗಂಗೊಳ್ಳಿ ಮುಖ್ಯ ರಸ್ತೆಯ ಜಾಮಿಯಾ ಮೊಹಲ್ಲಾ ಎಂಬಲ್ಲಿ ನಡೆದಿದೆ.

ಮೃತರನ್ನು ಗಂಗೊಳ್ಳಿ ದಾಕಹಿತ್ಲು ನಿವಾಸಿ ಗುರುರಾಜ್ ಪೂಜಾರಿ(28) ಎಂದು ಗುರುತಿಸಲಾಗಿದೆ. ತ್ರಾಸಿಯಿಂದ ಗಂಗೊಳ್ಳಿ ಕಡೆ ಹೋಗುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಲಾರಿಯು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಗುರುರಾಜ್ ಪೂಜಾರಿ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ.

ಬೆಂಗಳೂರಿನ ಹೊಟೇಲೊಂದರಲ್ಲಿ ಉದ್ಯೋಗಿಯಾಗಿರುವ ಗುರುರಾಜ್ ಪೂಜಾರಿ, 10 ದಿನಗಳ ಹಿಂದೆ ರಜೆಯಲ್ಲಿ ಊರಿಗೆ ಬಂದಿದ್ದರು. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News