ಹೊನ್ನಾವರ: ಬೈಕ್-ಲಾರಿ ಮುಖಾಮುಖಿ ಢಿಕ್ಕಿ; ಸವಾರರಿಬ್ಬರು ಮೃತ್ಯು

Update: 2019-01-02 17:29 GMT

ಹೊನ್ನಾವರ,ಜ.2: ಬೈಕ್ ಮತ್ತು ಲಾರಿ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕೆರೆಮನೆ ತಿರುವಿನಲ್ಲಿ ನಡೆದಿದೆ.

ಕುಂದಾಪುರ ಮೂಲದ ದಿನೇಶ್ ಮಡಿವಾಳ (26) ಮಾವಿನ ಕುರ್ವ ಗ್ರಾಮದ ಪ್ರಸನ್ನ ಆಚಾರಿ (23) ಮೃತಪಟ್ಟವರು.

ಹೊನ್ನಾವರದಿಂದ ಬಸ್ತಿ ಕಡೆ ಹೋಗುತ್ತಿದ್ದ ಬೈಕ್ ಗೆ ಹೊನ್ನಾವರದ ಕಡೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದ್ದು, ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News