ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ

Update: 2019-01-03 13:00 GMT

ಬೆಂಗಳೂರು, ಜ.3: ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ, ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ನಗರದ ಮೈಸೂರು ರಸ್ತೆಯ ಹೊಸ ಗುಡ್ಡದಹಳ್ಳಿಯಲ್ಲಿರುವ ವೇಮನ ಶಾಲೆಯ ಹಿಂಭಾಗದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಘಟನೆ ನಡೆಯುತ್ತಿದ್ದಂತೆ ಬೆಂಕಿ ನಂದಿಸಲು ಸ್ಥಳೀಯರು ಮುಂದಾಗಿದ್ದು, ಬಾಲಕ ಸತ್ಯ ಹಾಗೂ ಆತನ ತಂದೆಗೆ ಬೆಂಕಿ ತಗುಲಿದ್ದು, ಗಂಭೀರ ಗಾಯಗಳಾಗಿವೆ.

ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News