ಹಿಂಸಾಚಾರಕ್ಕೆ ತಿರುಗಿದ ಕೇರಳ ಹರತಾಳ: 750 ಮಂದಿಯ ಬಂಧನ

Update: 2019-01-03 17:26 GMT

ತಿರುವನಂತಪುರಂ, ಜ.3: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿರೋಧಿಸಿ ಕೇರಳದಾದ್ಯಂತ ಬಿಜೆಪಿ, ಸಂಘಪರಿವಾರ ಹಮ್ಮಿಕೊಂಡಿದ್ದ ಹರತಾಳ ಹಿಂಸಾಚಾರಕ್ಕೆ ತಿರುಗಿದ್ದು, 30 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿ ಇದುವರೆಗೆ 750 ಮಂದಿಯನ್ನು ಬಂಧಿಸಲಾಗಿದೆ.

ನಾಡಬಾಂಬ್ ಗಳು ಮತ್ತು ಕಲ್ಲುಗಳನ್ನು ಹಿಡಿದುಕೊಂಡಿದ್ದ ಗುಂಪುಗಳು ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿವೆ. ಕೋಯಿಕ್ಕೋಡ್, ಕಣ್ಣೂರು, ಮಲಪ್ಪುರಂ, ಪಾಲಕ್ಕಾಡ್ ನಲ್ಲಿ ತೀವ್ರ ಹಿಂಸಾಚಾರ ನಡೆದ ಬಗ್ಗೆ ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News