ಬೈಕ್ ಢಿಕ್ಕಿ: ಪಾದಾಚಾರಿ ಮೃತ್ಯು
Update: 2019-01-03 17:39 GMT
ಕಾಪು, ಜ. 3: ಮೂಳೂರು ಈಸ್ಟ್ವೆಸ್ಟ್ ನರ್ಸರಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ. 2ರಂದು ರಾತ್ರಿ ವೇಳೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ವುೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಉಚ್ಚಿಲ ನಿವಾಸಿ ನಾಗೇಶ್ ಪುತ್ರನ್ ಎಂದು ಗುರುತಿಸಲಾಗಿದೆ. ಉಚ್ಚಿಲ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ನಾಗೇಶ್ ಪುತ್ರನ್ಗೆ ವಿರುದ್ದ ದಿಕ್ಕಿನಿಂದ ಬಂದ ಬೈಕ್ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಅಪಘಾತ ನಡೆಸಿದ ಬಳಿಕ ಸವಾರ ಬೈಕನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಗಂಭೀರ ವಾಗಿ ಗಾಯಗೊಂಡ ನಾಗೇಶ್ ಪುತ್ರನ್ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.