ಮಂಜೇಶ್ವರ ತಾಲೂಕಿನ ಶಾಲೆಗಳಿಗೆ ಇಂದು ರಜೆ

Update: 2019-01-04 04:21 GMT

ಮಂಜೇಶ್ವರ, ಜ.4: ಶಬರಿಮಲೆ ವಿವಾದಕ್ಕೆ ಸಂಬಂಧಿಸಿ ಗುರುವಾರ ನಡೆದ ಹರತಾಳದ ವೇಳೆ ವ್ಯಾಪಕ ಹಿಂಸಾಚಾರ ಸಂಭವಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜ.4ರಂದು) ಮಂಜೇಶ್ವರ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಸಾರಲಾಗಿದೆ.

ಜಿಲ್ಲಾಧಿಕಾರಿಯ ಆದೇಶ ಪ್ರಕಾರ ಮಂಜೇಶ್ವರ ತಾಲೂಕು ಮಟ್ಟದ ಎಲ್ಲಾ ಶಾಲೆಗಳಿಗೂ ಶುಕ್ರವಾರ ರಜೆ ಸಾರಲಾಗಿದೆ ಎಂದು ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಿನ್ನೆ ಹರತಾಳ ಮುಕ್ತಾಯಗೊಂಡ ಬಳಿಕ ರಾತ್ರಿ ಮಂಜೇಶ್ವರ ತಾಲೂಕಿನ ಕೆಲವೆಡೆ ಅಹಿತಕರ ಘಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ 144 ಸೆಕ್ಷನ್ ನಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಾರಿಗೊಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News