ಎರಡು ಪ್ರತ್ಯೇಕ ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ರದ್ದುಪಡಿಸಿದ ಹೈಕೋರ್ಟ್

Update: 2019-01-05 15:26 GMT

ಬೆಂಗಳೂರು, ಜ.5: ಎರಡು ಪ್ರತ್ಯೇಕ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ನ್ಯಾಯಮೂರ್ತಿ ಬಿ.ಎ.ಪಾಟೀಲ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಶೇಷ ವಿಭಾಗೀಯ ನ್ಯಾಯಪೀಠ ಈ ಕುರಿತ ಪ್ರಕರಣಗಳನ್ನು ವಿಚಾರಣೆ ನಡೆಸಿತು. ವಿಶೇಷ ಎಂದರೆ ಈ ಪ್ರಕರಣದಲ್ಲಿ ಆರೋಪಿಗಳ ಮೇಲ್ಮನವಿಯನ್ನು ರಾಜ್ಯ ಕಾನೂನು ಸೇವೆಗಳ ನೆರವಿನ ಪ್ರಾಧಿಕಾರದ ಮುಖಾಂತರ ಸಲ್ಲಿಸಲಾಗಿತ್ತು. ಉಚಿತ ಕಾನೂನು ನೆರವಿನ ಅಡಿಯಲ್ಲಿ ಬಡವರೂ ಹೈಕೋರ್ಟ್‌ನಲ್ಲಿ ನ್ಯಾಯ ಪಡೆಯಬಹುದು ಎಂಬುದಕ್ಕೆ ಈ ಪ್ರಕರಣ ನಿದರ್ಶನವಾಗಿದೆ ಎಂಬುದು ಮೇಲ್ಮನವಿಯಲ್ಲಿ ಆರೋಪಿಗಳ ಪರ ಹಾಗೂ ಪ್ರಾಧಿಕಾರದಿಂದ ಹಾಜರಾಗಿ ವಾದ ಮಂಡಿಸಿದ ವಕೀಲ ಅರುಣ ಶ್ಯಾಮ್ ಅವರ ಅಭಿಪ್ರಾಯ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News