ಕೇರಳದಲ್ಲಿ ಮುಂದುವರಿದ ಹಿಂಸಾಚಾರ ; ವರದಿ ಕೇಳಿದ ಕೇಂದ್ರ ಸರಕಾರ

Update: 2019-01-06 04:41 GMT

ಹೊಸದಿಲ್ಲಿ, ಜ.6: ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಬ್ಬರು ಪ್ರವೇಶಿಸಿದ ಹಿನ್ನೆಲೆಯಲ್ಲಿ ಕಣ್ಣೂರು ಸೇರಿದಂತೆ ಕೇರಳದ ವಿವಿಧ ಜಿಲ್ಲೆಗಳಲ್ಲಿ ಹಿಂಸಾಚಾರ ಮುಂದುವರಿದಿದ್ದು, ಕೇರಳದ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರಕಾರವು ರಾಜ್ಯ ಸರಕಾರದ ವರದಿ ಕೇಳಿದೆ.

“ನಾವು ಕೇರಳದ ಪರಿಸ್ಥಿತಿಯ ಬಗ್ಗೆ ವರದಿ ಕೇಳಿದ್ದೇವೆ. ಆದರೆ ಇನ್ನೂ ರಾಜ್ಯ ಸರಕಾರದ ವರದಿ ಬಂದಿಲ್ಲ ‘’ ಎಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ತಿಳಿಸಿದ್ದಾರೆ.

ಪ್ರತಿಭಟನೆ, ಹಿಂಸಾಚಾರಕ್ಕೆ ಸಂಬಂಧಿಸಿ ಸುಮಾರು 3,000 ಮಂದಿಯನ್ನು ಈ ವರೆಗೆ ಬಂಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News