​ಕಾಸರಗೋಡು : ಅಂಬ್ಯುಲೆನ್ಸ್ ಢಿಕ್ಕಿ; ಸೈಕಲ್ ಸವಾರ ಮೃತ್ಯು, ಇಬ್ಬರಿಗೆ ಗಾಯ

Update: 2019-01-06 12:19 GMT

ಕಾಸರಗೋಡು, ಜ. 6 : ಅಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಸೈಕಲ್  ಸವಾರ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಲ್ಲಂ ನಲ್ಲಿ  ರವಿವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಚಂದ್ರನ್ (60) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಿಂತಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. 

ಕೊಲ್ಲಂನ ಓಚಿರ ಎಂಬಲ್ಲಿ ಈ ಅಪಘಾತ ನಡೆದಿದೆ. ನಿಯಂತ್ರಣ ತಪ್ಪಿದ ಅಂಬ್ಯುಲೆನ್ಸ್ ಸೈಕಲ್, ಎರಡು ಸ್ಕೂಟರ್, ಆಟೋರಿಕ್ಷಾ ಹಾಗೂ  ವಿದ್ಯುತ್  ಕಂಬಕ್ಕೆ ಢಿಕ್ಕಿ ಹೊಡೆದಿದೆ. ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಗುವೊಂದನ್ನು ಅಂಬ್ಯುಲೆನ್ಸ್ ನಲ್ಲಿ  ತಿರುವನಂತಪುರದ ಆಸ್ಪತ್ರೆಗೆ ಕೊಂಡೊಯ್ದು ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಅಂಬ್ಯುಲೆನ್ಸ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News