ಕಾಸರಗೋಡು : ಅಂಬ್ಯುಲೆನ್ಸ್ ಢಿಕ್ಕಿ; ಸೈಕಲ್ ಸವಾರ ಮೃತ್ಯು, ಇಬ್ಬರಿಗೆ ಗಾಯ
Update: 2019-01-06 12:19 GMT
ಕಾಸರಗೋಡು, ಜ. 6 : ಅಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಲ್ಲಂ ನಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಚಂದ್ರನ್ (60) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಿಂತಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಕೊಲ್ಲಂನ ಓಚಿರ ಎಂಬಲ್ಲಿ ಈ ಅಪಘಾತ ನಡೆದಿದೆ. ನಿಯಂತ್ರಣ ತಪ್ಪಿದ ಅಂಬ್ಯುಲೆನ್ಸ್ ಸೈಕಲ್, ಎರಡು ಸ್ಕೂಟರ್, ಆಟೋರಿಕ್ಷಾ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಗುವೊಂದನ್ನು ಅಂಬ್ಯುಲೆನ್ಸ್ ನಲ್ಲಿ ತಿರುವನಂತಪುರದ ಆಸ್ಪತ್ರೆಗೆ ಕೊಂಡೊಯ್ದು ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಅಂಬ್ಯುಲೆನ್ಸ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.