"ಬೆಂಗಳೂರು ಪೊಲೀಸ್ ಆಯುಕ್ತರಿಗೆ ಅಜಿತ್ ಹನುಮಕ್ಕನವರ್ ವಿರುದ್ಧದ ಪ್ರಕರಣಗಳ ತನಿಖೆಯ ಹೊಣೆ"

Update: 2019-01-06 15:11 GMT
ಟಿ. ಸುನೀಲ್‌ ಕುಮಾರ್

ಮಂಗಳೂರು, ಜ.6: ಪ್ರವಾದಿ ಮುಹಮ್ಮದರನ್ನು ನಿಂದಿಸಿದ ಆರೋಪ ಎದುರಿಸುತ್ತಿರುವ ಖಾಸಗಿ ಸುದ್ದಿವಾಹಿನಿಯ ಅಜಿತ್ ಹನುಮಕ್ಕನವರ್ ವಿರುದ್ಧದ ಪ್ರಕರಣಗಳ ತನಿಖೆ ನಡೆಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ. ಸುನೀಲ್‌ ಕುಮಾರ್ ಅವರಿಗೆ ಗೃಹ ಸಚಿವ ಎಂ.ಬಿ.ಪಾಟೀಲ್ ಸೂಚಿಸಿರುವುದಾಗಿ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಯ ಅಜಿತ್ ಹನುಮಕ್ಕನವರ್ ಟಿವಿ ಚರ್ಚೆಯಲ್ಲಿ ಪ್ರವಾದಿಯನ್ನು ನಿಂದಿಸಿದ್ದರೆಂದು ಹಲವು ಸಂಘ, ಸಂಸ್ಥೆಗಳಿಂದ ಆಕ್ರೋಶ ವ್ಯಕ್ತಪಡಿಸಿತ್ತು. ರಾಜ್ಯಾದ್ಯಂತ ವಿವಿಧ ಸಂಘಟನೆಗಳಿಂದ ನೂರಾರು ಮನವಿ, ದೂರು, ಪ್ರಕರಣಗಳು ದಾಖಲಾಗಿದ್ದವು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ ದಾಖಲಾಗಿರುವ ಎಲ್ಲ ದೂರು, ಪ್ರಕರಣಗಳನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ವರ್ಗಾಯಿಸಲಾಗಿದ್ದು, ಶೀಘ್ರದಲ್ಲಿ ತನಿಖೆ ನಡೆಸಲು ಗೃಹ ಸಚಿವರು ತಿಳಿಸಿರುವುದಾಗಿ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News